ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರಿನ ಮೇಲೆ ದಾಳಿ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಕಾರ್ಯಕರ್ತನ ಮನೆಗೆ ಭೇಟಿ ನೀಡಲು ಹೋಗುತ್ತಿದ್ದ ಸಂದರ್ಭದಲ್ಲಿ ಉದ್ರಿಕ್ತ ಜನರು ಅವರ ಕಾರಿನ ಮೇಲೆ ಬಾಟಲಿ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ. ಪೊಲೀಸರ ಹಲ್ಲೆಯಿಂದ ಕಾರ್ಯಕರ್ತ ಸಾವನ್ನಪ್ಪಿದ್ದಾನೆ ಎಂದು ಆತನ ಆಪ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ಸುವೇಂದು ಅಧಿಕಾರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments